ಇಡೀ ದೇಶದ ಕುತೂಹಲ ಕೆರಳಿಸಿರುವ ಕರ್ನಾಟಕ ರಾಜಕೀಯ ವಿಚಾರ ಇದೀಗ ನಿರ್ಣಾಯಕ ಘಟ್ಟ ತಲುಪಿದ್ದು, ಇಂದು ಸಿಎಂ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ ಎಲ್ಲ ಇದೀಗ ಎಲ್ಲರ ನಿರೀಕ್ಷೆ ಹುಸಿಯಾಗಿದ್ದು, ಕಲಾಪ ಚರ್ಚೆಯಲ್ಲೇ ಸಮಯ ಕಳೆಯುತ್ತಿದೆ. ಇತ್ತ ಆಡಳಿತ ಪಕ್ಷದ ಸದಸ್ಯರು ರಾಜ್ಯಪಾಲರ ಅಧಿಕಾರ ವ್ಯಾಪ್ತಿ ಮತ್ತು ಅವರ ಕಾರ್ಯ ವೈಖರಿ ಕುರಿತಂತೆ ಸಾಂವಿಧಾನಾತ್ಮಕ ಅಂಶಗಳನ್ನು ಮುಂದಿರಿಲಿ ಕಲಾಪದಲ್ಲಿ ಚರ್ಚೆ ನಡೆಸಿದರು.