ವಿಧಾನ ಸೌಧ
ವಿಧಾನ ಸೌಧ

ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು: ಕಟ್ಟಡ ಬೈಲಾ ತಿದ್ದುಪಡಿಗೆ ತಿಲಾಂಜಲಿ?

ರಾಜ್ಯ ಮೈತ್ರಿ ಸರ್ಕಾರದಲ್ಲಿನ ರಾಜಕೀಯ ಬಿಕ್ಕಟ್ಟು ಹಲವು ಕೆಲಸ ಕಾರ್ಯಗಳಿಗೆ ...
ಬೆಂಗಳೂರು: ರಾಜ್ಯ ಮೈತ್ರಿ ಸರ್ಕಾರದಲ್ಲಿನ ರಾಜಕೀಯ ಬಿಕ್ಕಟ್ಟು ಹಲವು ಕೆಲಸ ಕಾರ್ಯಗಳಿಗೆ ಅಡ್ಡಿಯನ್ನುಂಟುಮಾಡಿದೆ. ಕಟ್ಟಡ ಬೈ-ಲಾ ನಿಯಮಗಳಿಗೆ ತಿದ್ದುಪಡಿ ಅವುಗಳಲ್ಲಿ ಒಂದಾಗಿದೆ. 
ಹೊಸದಾಗಿ ನಿರ್ಮಾಣವಾಗುವ ಅಪಾರ್ಟ್ ಮೆಂಟ್ ಗಳಲ್ಲಿ ನಿರ್ದಿಷ್ಟ ಜಾಗವನ್ನು ಎಲೆಕ್ಟ್ರಿಕ್ ವಾಹನಗಳ ನಿಲುಗಡೆ ಮತ್ತು ಅವುಗಳನ್ನು ಸೌರ ವಿದ್ಯುತ್ ಮೂಲಕ ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆ ಒದಗಿಸಬೇಕೆಂಬುದು ಈ ನಿಯಮವಾಗಿದೆ.
ನಿರ್ಮಾಣ ಹಂತದ ಕಟ್ಟಡಗಳಲ್ಲಿ ಈ ನಿಯಮವನ್ನು ಕಡ್ಡಾಯಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಪ್ರಸ್ತಾವನೆಯನ್ನು ರಚಿಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೌರ ನೀತಿಯನ್ನು ಗಮನದಲ್ಲಿಟ್ಟುಕೊಂಡು ನಗರದಲ್ಲಿನ ವಾಯುಮಾಲಿನ್ಯವನ್ನು ನಿಯಂತ್ರಿಸಲು ವಿದ್ಯುತ್ ಚಾಲಿತ ವಾಹನ ಬಳಕೆಯನ್ನು ಪ್ರೋತ್ಸಾಹಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. 
ಈ ಬೈ-ಲಾ ತಿದ್ದುಪಡಿ ಮೂಲಕ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡಬೇಕೆಂಬುದು ಇಂಧನ ಇಲಾಖೆಯ ಉದ್ದೇಶವಾಗಿದೆ. 
ರಾಜ್ಯದಲ್ಲಿನ ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟಿನಿಂದಾಗಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ, ರಾಜಕೀಯ ನಾಯಕರು ಕೇವಲ ತಮ್ಮ ಸ್ವಾರ್ಥ ರಾಜಕಾರಣದಲ್ಲಿ ತೊಡಗಿದ್ದಾರೆ ಎಂಬ ಆರೋಪ ಸಾರ್ವಜನಿಕರದ್ದಾಗಿದೆ. 

Related Stories

No stories found.

Advertisement

X
Kannada Prabha
www.kannadaprabha.com