ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಶಾಸಕ ಮತ್ತು ಹಾಲಿ ಸಚಿವ ಜಮೀರ್ ಅಹ್ಮದ್ ಖಾನ್ ರನ್ನೂ ಕೂಡ ಅಧಿಕಾರಿಗಳು ತನಿಖೆಗೊಳಪಡಿಸುವ ಸಾಧ್ಯತೆ ಇದ್ದು, ಈ ಹಿಂದೆ ಮನ್ಸೂರ್ ಖಾನ್ ಅವರಿಗೆ ಆಸ್ತಿ ಮಾರಾಟ ಮಾಡಿದ ಕುರಿತು ಜಮೀರ್ ರನ್ನು ಅಧಿಕಾರಿಗಳು ತನಿಖೆ ನಡೆಸಿದ್ದರು. ಅಂದು ಸುದ್ದಿಗೋಷ್ಠಿ ನಡೆಸಿದ್ದ ಜಮೀರ್ ಅವರು, ತಾವು ತನ್ನ ಆಸ್ತಿಯನ್ನು ಕಾನೂನು ಬದ್ಧವಾಗಿಯೇ ಮನ್ಸೂರ್ ಖಾನ್ ಅವರಿಗೆ ಮಾರಾಟ ಮಾಡಿದ್ದೇನೆ. ಇದರಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಯಲ್ಲಿ ತಾನು ಭಾಗಿಯಾಗಿಲ್ಲ ಎಂದು ಹೇಳಿ, ದಾಖಲೆಗಳನ್ನೂ ಕೂಡ ನೀಡಿದ್ದರು. ಅಲ್ಲದೆ ತನಿಖೆ ಸಂಬಂಧ ಅಧಿಕಾರಿಗಳು ಯಾವುದೇ ಸಂದರ್ಭದಲ್ಲೂ ವಿಚಾರಣೆಗೆ ಹಾಜರಾಗಲು ತಾನು ಸಿದ್ಧ ಎಂದು ಹೇಳಿದ್ದರು.