ಈ ಮಧ್ಯೆ ಸ್ಥಳಕ್ಕೆ ಆಗಮಿಸಿದ ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಗಂಗಾವತಿಯಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿ, ವೃಂದಾವನದ ಕಲ್ಲಿನ ಕಂಬಗಳು , ವ್ಯಾಸರಾಜರ ಸಮಾಧಿಗಳನ್ನು ದುಷ್ಕರ್ಮಿಗಳು ಧ್ವಂಸ ಮಾಡಿದ್ದು ಅವುಗಳ ಪುನರ್ ನಿರ್ಮಾಣ ಕಾರ್ಯ ನಡೆದಿದೆ. ಧಾರ್ಮಿಕ ಕಾರ್ಯ ಎಂದಿನಂತೆ ಸಾಗಲಿದೆ ಎಂದರು.