ಇದೀಗ ಬಂಧಿತರಿಂದ ವೃಂದಾವನ ದ್ವಂಸಕ್ಕೆ ಬಳಸಲಾಗಿದ್ದ ಹಾರೆ, ಕಬ್ಬಿಣದ ಚಾಣ, ಸಲಾಕೆ, ಪಿಕಾಸಿ, ಸುತ್ತಿಗೆ, ಮತ್ತು ಆಂಧ್ರ ಪ್ರದೇಶ ನೊಂದಣಿ ಸಂಖ್ಯೆ ಹೊಂದಿರುವ ಇನ್ನೋವಾ ಕಾರ್ ಅನ್ನು ವಶಕ್ಕೆ ಪಡೆಯಲಾಗಿದೆ.ನಿಧಿ, ಅಪಾರ ಸಂಪತ್ತಿನ ಆಸೆಗಾಗಿ ಯತಿಗಳ ವೃಂದಾವನ ದ್ವಂಸ ಮಾಡಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿರುವುದಾಗಿ ಪೋಲೀಸರು ಹೇಳಿದ್ದಾರೆ.