ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬಾ ತಾಲೂಕಿನ ಜೋಳದ ಗದ್ದೆ ಗ್ರಾಮದಲ್ಲಿ ನಡೆದಿದೆ.
ಪೊಲೀಸರು ಮೃತರನ್ನು ಪ್ರದೀಪ್ (17), ಕಾರ್ತಿಕ್ (18) ಹಾಗೂ ಸುರೇಶ್ (16) ಎಂದು ಗುರುತಿಸಿದ್ದಾರೆ. ಭಾನುವಾರ ಈ ಬಾಲಕರು ನದಿಯಲ್ಲಿ ಈಜಲು ಹೋದಾಗ ಸುಳಿಯಲ್ಲಿ ಸಿಲುಕಿ ನಿಯಂತ್ರಣ ಕಳೆದುಕೊಂಡು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಅಗ್ನಿ ಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಮುಳುಗು ತಜ್ಞರು ಎರಡು ಮೃತದೇಹಗಳನ್ನು ಪತ್ತೆ ಹಚ್ಚಿದ್ದು, ಮೂರನೇ ಬಾಲಕನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.