ಮೈಸೂರು: ಲಾರಿ-ಬೈಕ್ ನಡುವೆ ಡಿಕ್ಕಿ ಸ್ನೇಹಿತರ ಮನೆಗೆ ಊಟಕ್ಕೆ ತೆರಳಿದ್ದ ನಾಲ್ವರು ದುರ್ಮರಣ

ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಇಂಡವಾಳು ಗ್ರಾಮದ ಬಳಿ ನಡೆದಿದೆ.
ಮೈಸೂರು: ಲಾರಿ-ಬೈಕ್ ನಡುವೆ ಡಿಕ್ಕಿ ಸ್ನೇಹಿತರ ಮನೆಗೆ ಊಟಕ್ಕೆ ತೆರಳಿದ್ದ ನಾಲ್ವರು ದುರ್ಮರಣ
ಮೈಸೂರು: ಲಾರಿ-ಬೈಕ್ ನಡುವೆ ಡಿಕ್ಕಿ ಸ್ನೇಹಿತರ ಮನೆಗೆ ಊಟಕ್ಕೆ ತೆರಳಿದ್ದ ನಾಲ್ವರು ದುರ್ಮರಣ
ಮೈಸೂರು: ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ  ತಿ.ನರಸೀಪುರ ತಾಲೂಕಿನ ಇಂಡವಾಳು ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಎಚ್.ಡಿ.ಕೋಟೆ ತಾಲೂಕಿನ ಕಂದೇಗಾಲ ನಿವಾಸಿ ರಾಘವೇಂದ್ರ (25), ಕಂಚಮಳ್ಳಿ ನಿವಾಸಿ ಮಧುಕುಮಾರ್ (19), ನಂಜನಗೂಡು ತಾಲೂಕಿನ ಹುರಾ ಗ್ರಾಮದ ಮಧು ಮತ್ತು ಒಡಿಸ್ಸಾ ಮೂಲದ ಅಹಮ್ಮದ್ ಖಾನ್ ಎನ್ನುವವರು ಸಾವನ್ನಪ್ಪಿದ್ದಾರೆ.
ಇವರೆಲ್ಲರೂ ಸ್ನೇಹಿತನ ಮನೆಗೆ ಊಟಕ್ಕೆಂದು ಹೋಗಿದ್ದರು. ಊಟ ಮುಗಿಸಿಕೊಂಡು ಹಿಂದಿರುಗುವ ವೇಳೆ ನಡುರಾತ್ರಿಯಲ್ಲಿ ಲಾರಿ ಹಾಗೂ ಬೈಕುಗಳ ನಡುವೆ ಡಿಕ್ಕಿಯಾಗಿದೆ.
ಮೃತರೆಲ್ಲರೂ ಮೈಸೂರಿನ ಹೋಟೆಲ್ ಒಂದರಲ್ಲಿ ಉದ್ಯೋಗದಲ್ಲಿದ್ದರೆಂದು ಮಾಹಿತಿ ಇದೆ.
ಮೃತದೇಹಗಳನ್ನು  ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ..

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com