ಬೆಂಗಳೂರು ಮೂಲದ ವಕೀಲ ಎನ್.ಪಿ ಅಮೃತೇಶ್ ಅವರು ಈ ದೂರು ಸಲ್ಲಿಸಿದ್ದು, ಜುಲೈ 10ರಂದು ಸುಧಾಕರ್ ಅವರು ವಿಧಾನಸಭೆಯ ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿ ಮರಳುವಾಗ ಅಲ್ಲಿ ಉಪಸ್ಥಿತರಿದ್ದ ಪ್ರಿಯಾಂಕ್ ಖರ್ಗೆ, ಸಿದ್ದರಾಮಯ್ಯ, ಯು.ಟಿ.ಖಾದರ್ ಹಾಗೂ ವಿಧಾನಪರಿಷತ್ತಿನ ಹಲವು ಸದಸ್ಯರು ಅವರನ್ನು ಎಳೆದಾಡಿ, ಸಚಿವ ಕೆ.ಜೆ.ಜಾರ್ಜ್ ಅವರ ಕಚೇರಿಗೆ ಕರೆದೊಯ್ದು ದೈಹಿಕ ಹಲ್ಲೆ ನಡೆಸಿದ್ದಲ್ಲದೆ, ರಾಜೀನಾಮೆ ಹಿಂಡಪೆಯುವಂತೆ ಒತ್ತಡ ಹೇರಿದ್ದಾರೆ. ಈ ದೃಶ್ಯಾವಳಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ ಎಂದು ಆರೋಪಿಸಿದ್ದಾರೆ.