ಇತ್ತ ಕರ್ನಾಟಕ ವಿಧಾನಸಭೆ ಕಲಾಪದಲ್ಲಿ ದೋಸ್ತಿ ಸರ್ಕಾರದ ಮುಖ್ಯಮತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ವಿಶ್ವಾಸಮತ ಯಾಚನೆಯಲ್ಲಿ ವಿಫಲರಾದ ಬೆನ್ನಲ್ಲೇ ಬಿಜೆಪಿ ಸರ್ಕಾರ ರಚನೆ ಬಹುತೇಕ ಖಚಿತವಾಗಿತ್ತು. ಈ ವಿಚಾರ ಸುದ್ದಿಯಾದ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಮೈತ್ರಿಸರ್ಕಾರ ಆರಂಭವಾದ ಮೊದಲ ದಿನದಿಂದಲೂ ಸರ್ಕಾರಕ್ಕೆ ಪಟ್ಟಭದ್ರ ಹಿತಾಸಕ್ತಿಗಳ ಬೆದರಿಕೆ ಇತ್ತು. ಅದಾಗ್ಯೂ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ತನ್ನ ಅಭಿವೃದ್ಧಿ ಪಥದಲ್ಲಿರುವ ಅಡಚಣೆಗಳನ್ನು ಬೆದರಿಕೆಗಳನ್ನು ಎದುರಿಸಿಕೊಂಡು ಸಾಗುತ್ತಿತ್ತು.