ಐಎಂಎ ವಂಚನೆ ಕೇಸಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಎಲ್ಲಾ ಪೊಂಜಿ ಹಗರಣಗಳ ತನಿಖೆ ನಿಭಾಯಿಸಲು ರಾಜ್ಯ ಸರ್ಕಾರ ಒಪ್ಪಿದೆಯೇ ಎಂದು ಪರೀಕ್ಷಿಸುವಂತೆ ನ್ಯಾಯಾಲಯ ಸರ್ಕಾರಿ ಪರ ವಕೀಲರಿಗೆ ಸೂಚಿಸಿದ್ದಾರೆ. ಈ ರೀತಿ ಹೂಡಿಕೆದಾರರಿಗೆ ವಂಚನೆ ಮಾಡುವ ಕಂಪೆನಿಗಳಿಗೆ ನಿರ್ದೇಶನ ನೀಡಬೇಕೆಂದು 2018ರಲ್ಲಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಉಲ್ಲೇಖಿಸಿದ ನ್ಯಾಯಾಲಯ 2018ರಲ್ಲಿಯೇ ಪೊಲೀಸರು ಇದರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದರೆ ಇಂತಹ ವಿಷಯಗಳು ನಡೆಯುತ್ತಿರಲಿಲ್ಲ ಎಂದು ಮೌಖಿಕವಾಗಿ ನ್ಯಾಯಾಧೀಶರು ಹೇಳಿದರು.