ಐಎಂಎ ವಂಚನೆ ಪ್ರಕರಣ: ಜಮೀರ್ ಅಹ್ಮದ್ ಖಾನ್ ಗೆ ಎಸ್ಐಟಿ ನೊಟೀಸ್

ಐಎಂಎ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ...
ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್
ಬೆಂಗಳೂರು: ಐಎಂಎ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ)ನಿರ್ಗಮಿತ ಸರ್ಕಾರದ ಸಚಿವ ಜಮೀರ್ ಅಹ್ಮದ್ ಖಾನ್ ಗೆ ನೊಟೀಸ್ ಜಾರಿ ಮಾಡಿದೆ.
ತನಿಖೆ ಸಂಬಂಧ ಮುಂದಿನ ಸೋಮವಾರ ಎಸ್ಐಟಿ ಮುಂದೆ ಹಾಜರಾಗುವಂತೆ ಜಮೀರ್ ಖಾನ್ ಗೆ ಸೂಚಿಸಲಾಗಿದೆ. ಈ ಹಿಂದೆ ಐಎಂಎ ಕೇಸಿಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಕೂಡ ಜಮೀರ್ ಅಹ್ಮದ್ ಗೆ ನೊಟೀಸ್ ನೀಡಿತ್ತು.
ಆಸ್ತಿಗೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಖಾನ್ ಮತ್ತು ಐಎಂಎ ಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಮನ್ಸೂರ್ ಖಾನ್ ನಡುವೆ ನಡೆದ ಹಣಕಾಸು ವಹಿವಾಟುಗಳಿಗೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆಯಿದೆ. 
ಇನ್ನು ಕಾಂಗ್ರೆಸ್ ನ ಅತೃಪ್ತ ಶಾಸಕ ರೋಶನ್ ಬೇಗ್ ಗೆ ಕೂಡ ಎಸ್ಐಟಿ ನೊಟೀಸ್ ಜಾರಿ ಮಾಡಿದ್ದು ಅವರಿಗೂ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com