ಕಲಬುರಗಿ: ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರಿಬ್ಬರು ಮೃತಪಟ್ಟಿರುವ ಘಟನೆ ನಗರದ ಗೋಕುಲ ನಗರದಲ್ಲಿ ಗುರುವಾರ ನಡೆದಿದೆ.
ಗಫೂರ್ ದೊಡ್ಮನಿ (40), ಅಮ್ಜದ್ ಕಲ್ಬುರ್ಗಿ (35) ಮೃತ ದುರ್ದೈವಿಗಳು. ಇಂದು ಮುಂಜಾನೆ ಗಂಗಾಧರ್ ಎಂಬುವವರು ಮನೆ ನಿರ್ಮಾಣ ಕೆಲಸ ಮಾಡುತ್ತಿದ್ದಾಗ ಕಬ್ಬಿಣದ ರಾಡ್ ಗೆ ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರೂ ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿಂತೆ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.