ಮಂಗಳೂರಿನಲ್ಲಿ ಸಿದ್ಧಾರ್ಥ್ ಅವರ ಪತ್ತೆ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದ ಯುಟಿ ಖಾದರ್ ಅವರು ಮೃತದೇಹ ಪತ್ತೆಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಖಾದರ್ ಅವರು, 'ಇದು ಅತ್ಯಂತ ನೋವಿನ ಸಂಗತಿ ಹಾಗೂ ಬಹಳ ಬೇಸರವಾಗುತ್ತಿದೆ. ಸಿದ್ಧಾರ್ಥ್ ಅವರು ಈ ರೀತಿ ನಮಗೆ ಸಿಕ್ಕಿದ್ದು, ಒಂದು ರೀತಿಯಲ್ಲಿ ಬೇಸರ ಆಗುತ್ತಿದೆ. ಮೊದಲು ಸಿದ್ಧಾರ್ಥ್ ಮೃತದೇಹವನ್ನು ಸ್ಥಳೀಯರು ನೋಡಿದ್ದಾರೆ. ಮೃತದೇಹವನ್ನು ಎಲ್ಲಿಗೆ ತೆಗೆದುಕೊಂಡು ಹೋಗಬೇಕು ಎಂಬುದು ಚರ್ಚೆ ಮಾಡುತ್ತೇವೆ. ಅದಕ್ಕೂ ಮೊದಲು ಕೆಲವು ಪ್ರಕ್ರಿಯೆ ಇದೆ. ಅದನ್ನು ಮುಗಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.