ಉದ್ಯಮಿ ಸಿದ್ದಾರ್ಥ್ ಅವರ ಅಂತ್ಯಕ್ರಿಯೆಯಲ್ಲಿ ತಾವು ಪಾಲ್ಗೊಳ್ಳಬೇಕಿದ್ದು, ಆದಷ್ಟು ಬೇಗ ಸದನ ಮುಗಿಸುವಂತೆ ಪೀಠಕ್ಕೆ ಅವರು ಮನವಿ ಮಾಡಿದ ಅವರು, ಸಭಾಧ್ಯಕ್ಷರ ಅನುಮತಿ ಪಡೆದು ಸದನದಿಂದ ಚಿಕ್ಕಮಗಳೂರಿಗೆ ತೆರಳುತ್ತಿರುವುದಾಗಿ ಹೇಳಿದರು. ಸಿದ್ದರಾಮಯ್ಯ ಮಾತನಾಡಿ, ಇಂದಿನ ದಿನಗಳಲ್ಲಿ ಸಂಸದೀಯ ಪ್ರಜಾತಂತ್ರ ವ್ಯವಸ್ಥೆ ಕ್ಷೀಣಿಸುತ್ತಿದ್ದು, ಕಲಾಪಗಳು ಸರಿಯಾಗಿ ನಡೆಯುತ್ತಿಲ್ಲ ಎಂಬ ಭಾವನೆಯಿದೆ. ಯಾವುದೇ ಕಾರಣಕ್ಕೂ ಸದನಕ್ಕಿರುವ ಪರಂಪರೆ ಕಳೆಯಬಾರದು ಎಂದು ಕಿವಿ ಮಾತು ಹೇಳಿದರು.