ಭೀಕರ ರಸ್ತೆ ಅಪಘಾತ : ಧಾರವಾಡದ ಒಂದೇ ಕುಟುಂಬದ 7 ಮಂದಿ ಸಾವು..!

ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಧಾರವಾಡ ಮೂಲದ ಒಂದೇ ಕುಟುಂಬಕ್ಕೆ ಸೇರಿದ ಏಳು ಮಂದಿ....
ಭೀಕರ ರಸ್ತೆ ಅಪಘಾತ : ಧಾರವಾಡದ ಒಂದೇ ಕುಟುಂಬದ 7 ಮಂದಿ ಸಾವು..!
ಭೀಕರ ರಸ್ತೆ ಅಪಘಾತ : ಧಾರವಾಡದ ಒಂದೇ ಕುಟುಂಬದ 7 ಮಂದಿ ಸಾವು..!
ಸತಾರ: ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಧಾರವಾಡ ಮೂಲದ ಒಂದೇ ಕುಟುಂಬಕ್ಕೆ ಸೇರಿದ ಏಳು ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆ ಕಾಶೀಳ ಬಳಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಎರಡೂವರೆ ವರ್ಷದ ಒಬ್ಬ ಬಾಲಕ ಮತ್ತು 5 ವರ್ಷದ ಬಾಲಕಿ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದೆ. ಮೃತರೆಲ್ಲರೂ ಧಾರವಾಡದ ನಿಜಾಮೋದಿನ ಸೌದಾಗರ ಗ್ರಾಮದವರೆಂದು ತಿಳಿದುಬಂದಿದೆ.
ಕಾರು ಚಾಲಕನಿಗೆ ಮತ್ತು ಒಂದು ಹೆಣ್ಣ ಮಗುವಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಕಾಶೀಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com