ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿದ ರೈಲ್ವೆ ರಕ್ಷಣಾ ಪಡೆಯ ಮೂಲಗಳು, ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ನಿರ್ವಹಿಸುತ್ತಿದ್ದ ಗುತ್ತಿಗೆದಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ಕೇಬಲ್ ಗಳನ್ನು ದರೋಡೆಕೋರರು ದರೋಡೆ ಮಾಡುವ ಸಂದರ್ಭದಲ್ಲಿ ಸ್ವಿಚ್ ಆಫ್ ಮಾಡುತ್ತಿದ್ದ, ಇಲ್ಲವೇ ಸಿಸಿಟಿವಿ ಕ್ಯಾಮರಾದ ಕೋನಗಳನ್ನು ಪ್ಲಾಟ್ ಫಾರಂನಿಂದ ರೈಲು ಹೊರಡುವ ಮೊದಲು ಬದಲಾಯಿಸುತ್ತಿದ್ದ. ಇದರಿಂದ ನಿಜವಾದ ದರೋಡೆಕೋರರು ಅಥವಾ ಕಳ್ಳರ ಗುರುತು ಸಿಗುವುದಿಲ್ಲ ಎಂದರು.ದೀರ್ಘ ಪ್ರಯಾಣದ ರೈಲುಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿರುತ್ತವೆ ಎನ್ನುತ್ತಾರೆ ಪೊಲೀಸರು.