ಟೀಕು ರಾಠೋಡ್ ಮತ್ತು ನರೇಂದ್ರ ಎಂಬುವರು ಅರಕೇರಾ ಗ್ರಾಮದ ಬಳಿ ಅಪಘಾತದಲ್ಲಿ ಗಾಯಗೊಂಡು ರಸ್ತೆ ಮೇಲೆ ಮಲಗಿದ್ದರು. ಈ ವೇಳೆ ಈ ಮಾರ್ಗದಲ್ಲಿ ಸಾಗುತ್ತಿದ್ದ ಸಂಸದ ಉಮೇಶ್ ಜಾಧವ್ ಕೂಡಲೇ ಕಾರು ನಿಲ್ಲಿಸಿ ಅವರನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ವಾಪಸ್ ಯಾದಗಿರಿಗೆ ಆಗಮಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.