ಊರಿಗೆ ಹೋಗಿದ್ದ ಈ ಮೂವರು ಒಂದೇ ಬೈಕ್ನಲ್ಲಿ ಬಾಗಲಗುಂಟೆಗೆ ರಾತ್ರಿ 11ರ ವೇಳೆ ಬರುತ್ತಿದ್ದಾಗ ಮಾರ್ಗ ಮಧ್ಯೆ ಎಡೇಹಳ್ಳಿ ಕ್ರಾಸ್ ಬಳಿ ರಸ್ತೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಇವರ ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪುನೀತ್, ಚೇತನ್ ಸ್ಥಳದಲ್ಲಿಯೇ ಮೃತಪಟ್ಟರೆ ಹಿಂಬದಿಯಲ್ಲಿ ಕುಳಿತಿದ್ದ ಶ್ರೀಧರ್ ತಲೆಗೆ ತೀವ್ರವಾಗಿಪೆಟ್ಟು ಬಿದ್ದಿದೆ.