ಆದರೆ ಸಂಪುಟ ಸಭೆಗೆ ಮುನ್ನ ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್ ಕೆ ಪಾಟೀಲ್ ಅವರು, ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಜೆಎಸ್ ಡಬ್ಯ್ಲು ಸ್ಟೀಲ್ ಗೆ ಭೂಮಿ ಮಾರಾಟ ಮಾಡುವ ನಿರ್ಣಯವನ್ನು ಸಚಿವ ಸಂಪುಟ ಅಂಗೀಕರಿಸದಂತೆ ಮನವಿ ಮಾಡಿದ್ದರು. ಆದರೂ ಸಚಿವ ಸಂಪುಟ ಸಭೆಯಲ್ಲಿ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್ ಅವರ ಒತ್ತಡಕ್ಕೆ ಮಣಿದು ಪರಬಾರೆಗೆ ಸಂಪುಟ ಸಮ್ಮತಿ ನೀಡಿತ್ತು ಎನ್ನಲಾಗಿದೆ.