ರಾಜ್ಯದ ಉಪಕ್ರಮವನ್ನು :ಕನ್ನಡ ವಿರೋಧಿ" ಎಂದು ಕರೆದ ಅವರು ಪ್ರಾಥಮಿಕ ಶಿಕ್ಷಣವನ್ನು ಇಂಗ್ಲಿಷ್ ಮಾದ್ಯಮದಲ್ಲಿ ನೀಡುವ ಕ್ರಮವು ಪ್ರಾಥಮಿಕ ಶಿಕ್ಷಣದ ಉದ್ದೇಶವನ್ನೇ ಹಾಳುಮಾಡುತ್ತದೆ, ಭವಿಷ್ಯದಲ್ಲಿ ಮಕ್ಕಳ ಉನ್ನತ ಶಿಕ್ಷಣದ ಮೇಲೆ ಇದು ಪರಿಣಾಮ ಮಾಡುತ್ತದೆ. ಕುವೆಂಪು, ಸಿ.ಎನ್.ಆರ್. ರಾವ್ ಮತ್ತು ಯು.ಆರ್. ರಾವ್ ಸೇರಿದಂತೆ ಹಲವು ಮಂದಿ ಕನ್ನಡ ಮಾದ್ಯಮದಲ್ಲೇ ಪ್ರಾಥಮಿಕ ಶಿಕ್ಷಣ ಪಡೆದು ಜಾಗತಿಕ ಮಟ್ಟದಲ್ಲಿ ಹೆಸರಾಗಿದ್ದಾರೆ" ಅವರು ಹೇಳಿದ್ದಾರೆ.