ಇದಕ್ಕೂ ಮುನ್ನ ಸಿಎಂ ಕುಮಾರಸ್ವಾಮಿ ಅವರು ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಿದ್ದರು. ಆದರೆ, ಸಚಿವ ಜಮೀರ್ ಅಹಮದ್ ಖಾನ್, ಶಾಸಕರಾದ ಎನ್.ಎ. ಹ್ಯಾರೀಸ್, ರಿಜ್ವಾನ್ ಅರ್ಷದ್, ನಜೀರ್ ಅಹಮದ್ ಮತ್ತು ಅಬ್ದುಲ್ ಜಬ್ಬಾರ್ ಅವರ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಬಹುಕೋಟಿ ವಂಚನೆ ಪ್ರಕರಣದ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದರು. ನಂತರ ಪ್ರಕರಣದ ಗಂಭೀರತೆ ಅರಿತು ಎಸ್ಐಟಿ ತನಿಖೆಗೆ ವಹಿಸಲಾಗಿದೆ.