ಬೆಂಗಳೂರು: ಕರ್ನಾಟಕದ ಸಿಂಗಂ ಎಂದೇ ಖ್ಯಾತರಾದ ಡಿಸಿಪಿ, ಎಸ್ಪಿ ಕೆ.ಅಣ್ಣಾಮಲೈ ಅವರು ಇತ್ತೀಚೆಗೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾಗಿದ್ದ ಬೆಂಗಳೂರು ದಕ್ಷಿಣ ಡಿಸಿಪಿ ಸ್ಥಾನಕ್ಕೆ ರೋಹಿಣಿ ಕಟೋಚ್ ಸೆಪಟ್ ನೇಮಕಗೊಂಡಿದ್ದಾರೆ.
ಇಂದು ಬೆಂಗಳೂರಿನ ಕಚೇರಿಯಲ್ಲಿ ಕೆ.ಅಣ್ಣಾಮಲೈ ಅವರಿಂದ ರೋಹಿಣಿ ಕಟೋಚ್ ಸೆಪಟ್ ಅಧಿಕಾರ ಸ್ವೀಕರಿಸಿದರು. ಈ ವೇಳೆ ಅಣ್ಣಾಮಲೈ ಅಧಿಕಾರ ಹಸ್ತಾಂತರಿಸಿ ಸೆಪಟ್ ಅವರನ್ನು ಶುಭ ಕೋರಿದರು.
ರೋಹಿಣಿ ಕಟೋಚ್ ಸೆಪಟ್ ಅವರಿಗೆ ಈ ಹಿಂದೆಯೂ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ ಅನುಭವವಿದ್ದು, ಕೋಲಾರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.