ಪತ್ನಿ ಶಿಲ್ಪಾ ವರದಕ್ಷಿಣೆ ಕಿರುಕುಳ ಕೊಡುತ್ತಿದ್ದಾನೆ ಎಂದು ಪತಿ ವಿರುದ್ಧ ಸುಳ್ಳು ಆರೋಪ ಮಾಡಿ ಪ್ರಕರಣ ದಾಖಲಿಸಿದ್ದಳು. ಈ ದೂರಿನ ನಂತರ ಪಿಎಸ್ಐ ಅಮರೇಶ್ ಕಿರುಕುಳ ನೀಡಿದ್ದು ಈ ಕಾರಣದಿಂದ ಮನನೊಂದು ದೊಡ್ಡಬಸವರಾಜ್, ಪತ್ನಿ ಮತ್ತು ಪೊಲೀಸ್ ಅಧಿಕಾರಿ ವಿರುದ್ಧ ಮೂರು ಪುಟದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.