ಬೆಂಗಳೂರು: 30 ವರ್ಷದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹೆಬ್ಬಾಳದ ಮನೋರಾಯನ ಪಾಳ್ಯದಲ್ಲಿ ನಡೆದಿದೆ.
ಕಳೆದ ಸೋಮವಾರ ರಾತ್ರಿ ಪುಷ್ಪವತಿ ಎಂಬ ಮಹಿಳೆ ತನ್ನ 5 ವರ್ಷದ ಮಗ ಜೀವನ್ ಹಾಗೂ 5 ತಿಂಗಳ ಮಗುವಿಗೆ ವಿಷವುಣಿಸಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತನ್ನ ಸಾವಿಗೆ ಯಾರೂ ಕಾರಣರಲ್ಲ. ಜೀವನದಲ್ಲಿ ಜಿಗುಪ್ಸೆಗೊಂಡಿದ್ದರಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟು ಮಹಿಳೆ ನೇಣಿಗೆ ಶರಣಾಗಿದ್ದಾರೆ.
ಪುಷ್ಪವತಿ ಮೂಲತಃ ತೀರ್ಥಹಳ್ಳಿ ನಿವಾಸಿಯಾಗಿದ್ದು, 10 ವರ್ಷದ ಹಿಂದೆ ನಾಗರಾಜ್ ಎಂಬುವರೊಂದಿಗೆ ಪ್ರೇಮವಿವಾಹವಾಗಿದ್ದರು. ಘಟನೆ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.