ಹೂಡಿಕೆದಾರರಿಗೆ ಬಹುಕೋಟಿ ವಂಚಿಸಿ ನಾಪತ್ತೆಯಾಗಿರುವ ಐಎಂಎ ಜುವೆಲ್ಸ್ ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ಕುರಿತಂತೆ ಮಾತನಾಡಿರುವ ಜಮೀರ್ ಅಹ್ಮದ್ ಖಾನ್, 'ಈಗ ಆಗಿರುವುಗುದು ಆಗಿಹೋಗಿದೆ. ಆದರೆ ದಯವಿಟ್ಟು ನೀವು ತಲೆ ಮರೆಸಿಕೊಳ್ಳುವ ಅಗತ್ಯವಿಲ್ಲ. ಧೈರ್ಯವಾಗಿ ಮುಂದೆ ಬನ್ನಿ, ನಿಮ್ಮೊಂದಿಗೆ ನಾವಿದ್ದೇವೆ, ನಿಮ್ಮ ಸಂಸ್ಥೆ ಕಾನೂನು ಬದ್ದವಾಗಿದ್ದರೆ, ಬನ್ನಿ ಬಡವರ ಹಣ ನೀಡಿ. ನಮಗೆ ನಾವು ಬೆಂಬಲ ನೀಡುತ್ತೆವೆ ಎಂದು ಹೇಳಿದ್ದಾರೆ.