ಕರಾವಳಿ ಜಿಲ್ಲೆಯಲ್ಲಿ ಇಷ್ಟು ದಿನ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗದೆ ಹಲವು ಕಡೆಗಳಲ್ಲಿ ನೀರಿಗೆ ತತ್ವರವುಂಟಾಗಿತ್ತು. ಅಡಿಕೆ, ತೆಂಗು, ಬಾಳೆ ತೋಟಗಳು ನೀರಿಲ್ಲದೆ ಒಣಗಿ ಹೋಗಿದ್ದವು. ನೇತ್ರಾವದಿ ನದಿ ನೀರಿನಲ್ಲಿ ಸಾಕಷ್ಟು ನೀರಿಲ್ಲದ್ದರಿಂದ ಧರ್ಮಸ್ಥಳಕ್ಕೆ ಭೇಟಿ ನೀಡುವವರು ತಮ್ಮ ಯಾತ್ರೆಯನ್ನು ಮುಂದೂಡುವಂತೆ, ಭಕ್ತರು ಪರಿಸ್ಥಿತಿಗೆ ಹೊಂದಿಕೊಳ್ಳುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಕರೆ ನೀಡಿದ್ದರು.