ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನಾಗಿದ್ದ ಮೈಲಾರಪ್ಪ 13 ವರ್ಷ ಕೆಳಗೆ ಸರೋಜಮ್ಮನನ್ನು ವಿವಾಹವಾಗಿದ್ದ. ನಮ್ಮ ಗ್ರಾಮದವನೇ ಆದ ವಿನಯ್ ಎಂಬಾತ ನನ್ನ ಪತ್ನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ನನ್ನ ಪತ್ನಿ ಅದಕ್ಕೆ ಸ್ಪಂದಿಸಿಲ್ಲ, ನಾನು ಪೋಲೀಸರಿಗೆ ದೂರು ಕೊಡಲು ಹೋದರೂ ಆತ ಪೋಲೀಸ್ ಅಧಿಕಾರಿಯ ಸಂಬಂಧಿಯಾಗಿದ್ದ ಕಾರಣ ಅವರೂ ದೂರು ಸ್ವೀಕರಿಸಲಿಲ್ಲ. ಇದರಿಂದ ಬೇಸತ್ತು ನಾವಿಬ್ಬರೂ ಆತ್ಮಹತ್ಯೆಗೆ ನಿರ್ಧರಿಸಿದ್ದೇವೆ. ನಮಗಾದ ಗತಿ ಯಾರಿಗೂ ಬರುವುದು ಬೇಡ ಈಂದು ಮೈಲಾರಪ್ಪ ವೀಡಿಯೋದಲ್ಲಿ ಉಲ್ಲೇಖಿಸಿದ್ದಾನೆ. ವಿನಯ್ ನನ್ನ ಬಗ್ಗೆ ಗ್ರಾಮದಲ್ಲೆಲ್ಲಾ ಅಪಪ್ರಚಾರ ಮಾಡುತ್ತಿದ್ದ ಆದರೆ ನನ್ನ ಪತಿ ನನ್ನ ಮೇಲೆ ಎಂದೂ ಸಂಶಯ ತಾಳಿಲ್ಲ ಎಂದು ಸರೋಜಮ ಸಹ ವೀಡಿಯೋದಲ್ಲಿ ಹೇಳಿಕೊಂಡಿದ್ದಾಳೆ.