ಕೊಡಗು: ಶಿಕ್ಷಕಿ ಹತ್ಯೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ದುಷ್ಕರ್ಮಿ

ಕಾಫಿನಾಡು ಕೊಡಗಿನಲ್ಲಿ ಶುಕ್ರವಾರ ಬೆಳಗ್ಗೆಯೇ ಕೊಲೆ ನಡೆದಿದೆ. ಶಾಲಾ ಶಿಕ್ಷಕಿಯೊಬ್ಬರ ಮೇಲೆ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕೊಡಗು: ಕಾಫಿನಾಡು ಕೊಡಗಿನಲ್ಲಿ ಶುಕ್ರವಾರ ಬೆಳಗ್ಗೆಯೇ ಕೊಲೆ ನಡೆದಿದೆ. ಶಾಲಾ ಶಿಕ್ಷಕಿಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 
ಇಂದು ಬೆಳಗ್ಗೆ ಕೊಡಗಿನ ಪೊನ್ನಂಪೇಟೆ ಬಳಿ ಬಾಳೆಲೆಯಲ್ಲಿ ಶಾಲೆಗೆ ಹೋಗಲು ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕೊಡಗಿನ ಲಯನ್ಸ್‌ ಶಾಲಾ ಶಿಕ್ಷಕಿ ಅದೇಂಗಡ ಆಶಾ ಕಾವೇರಮ್ಮ ದುಷ್ಕರ್ಮಿಯ ಗುಂಡೇಟಿಗೆ ಬಲಿಯಾದವರಾಗಿದ್ದಾರೆ. 
ಗುಂಡು ಹಾರಿಸಿದ ಆರೋಪಿ ಕೊನೆಗೆ ತನ್ನ ಮೇಲೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿಯನ್ನು ಗೋಣಿಕೊಪ್ಪಲುವಿನ ಮಾಚಿಮಾಡ ಜಗದೀಶ್ ಎಂದು ಗುರುತಿಸಲಾಗಿದೆ. ಘಟನೆ ವೇಳೆ ಶಿಕ್ಷಕಿಯ ರಕ್ಷಣೆಗೆ ಬಂದಿದ್ದ ಇಬ್ಬರಿಗೂ ಗಾಯವಾಗಿದೆ. 
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com