ರಾಜೀನಾಮೆ ಪತ್ರದಲ್ಲಿ ಅವರು ಕೆಲ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. 2018ರ ಡಿಸೆಂಬರ್ 13ರಂದು ಬಿ.ಎಂ. ಕಾವಲ್ ಪ್ರದೇಶದ 310 ಎಕರೆ 18 ಗುಂಟೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಪರಭಾರೆ ಮಾಡಿರುವ ಕುರಿತು ಪ್ರಸ್ತಾಪಿಸಿದ್ದೆ. ಇದಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವರು, ಈ ಸಂಬಂಧ ಜಿಲ್ಲಾಧಿಕಾರಿಗಳು ಮಾಡಿರುವ ಆದೇಶ ಕಾನೂನುಬಾಹಿರ ಎಂದು ಒಪ್ಪಿಕೊಂಡಿದ್ದರು. ಆಗ ನೀವು, ಅವರನ್ನು ಅಮಾನತ್ತಿನಲ್ಲಿಡುವಂತೆ ಸಚಿವರಿಗೆ ಸೂಚಿಸಿದ್ದೀರಿ. ಅದಕ್ಕೆ ಕಂದಾಯ ಸಚಿವರು ಒಪ್ಪಿಗೆ ಸೂಚಿಸಿದ್ದರು. ಆದರೆ, ಇಲ್ಲಿಯವರೆಗೂ ಜಿಲ್ಲಾಧಿಕಾರಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರಿ ಜಮೀನು ತೆರವಿಗೆ ಕೂಡ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.