ಕೊಡಗು ಸಂತ್ರಸ್ತರ ಮನೆಗಳ ಗುಣಮಟ್ಟದ ಬಗ್ಗೆ ನಟಿ ಹರ್ಷಿಕಾ ಪೂಣಚ್ಚ ಆಕ್ಷೇಪ ವ್ಯಕ್ತಪಡಿಸಿದ್ದು ಇದಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹರ್ಷಿಕಾಗೆ ಏನಾಗಿದೆ. ಆಕೆ ನಟಿಯಷ್ಟೇ. ಅವರು ಸಿನಿಮಾಗಳಲ್ಲಿ ಮಾತ್ರ ಅಭಿನಯಿಸಿಕೊಂಡಿರಬೇಕು. ಅದನ್ನು ಬಿಟ್ಟು ಬೇರೆ ಏನನ್ನು ಮಾತನಾಡಬಾರದು ಎಂದು ಹೇಳಿದ್ದಾರೆ.