ಕ್ಯಾನ್ಸರ್ ರೋಗ ಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಸೋಮಶೇಖರ್ ಮಾತನಾಡಿ, ಭಾರತದಲ್ಲಿ 11 ಲಕ್ಷ 50 ಸಾವಿರಕ್ಕೂ ಅಧಿಕ ಕ್ಯಾನ್ಸರ್ ಪೀಡಿತರಿದ್ದಾರೆ. ಕ್ಯಾನ್ಸರ್ ಗುಣಪಡಿಸಬಹುದಾದ ರೋಗವಾಗಿದ್ದರೂ, ಸಾವು ಖಚಿತ ಎಂಬ ಭಾವನೆಯಿಂದ ರೋಗಿಗಳು ಸಕಾಲಕ್ಕೆ ಚಿಕಿತ್ಸೆ ಪಡೆಯದೆ ಸಾವಿಗೀಡಾಗುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಆತ್ಮಸ್ಥೈರ್ಯ ಕಳೆದುಕೊಳ್ಳುವುದು. ಹಾಗಾಗಿ ಕ್ಯಾನ್ಸರ್ ರೋಗದಿಂದ ಬದುಕುಳಿದ ವ್ಯಕ್ತಿಗಳಿಗೆ ಹಾಗೂ ಕ್ಯಾನ್ಸರ್ ಪೀಡಿತರಿಗೆ ಭಾವನಾತ್ಮಕವಾಗಿ ಬಲಗೊಳ್ಳಲು ಮಾರ್ಗದರ್ಶನ ನೀಡಲಾಗುವುದು ಹಾಗೂ ವಿ ಕ್ಯಾನ್ ಅಭಿಯಾನದ ಮೂಲಕ ಆತ್ಮ ಸ್ಥೈರ್ಯ, ಉತ್ಸಾಹ ಹೆಚ್ಚಿಸುವ ಕೆಲಸ ಮಾಡಲಾಗುವುದು ಎಂದರು.