ಅಲೋಕ್ ಕುಮಾರ್ 1994ನೇ ಕೇಂದ್ರ ಲೋಕಸೇವಾ ಆಯೋಗದ ಬ್ಯಾಚ್ನಲ್ಲಿ ತೇರ್ಗಡೆಯಾಗಿ ಐಪಿಎಸ್ ಅಧಿಕಾರಿಯಾಗಿದ್ದರು. ಅಲೋಕ್ ಕುಮಾರ್ ಅವರು ಈ ಹಿಂದೆ ಭ್ರಷ್ಟಾಚಾರ ನಿಗ್ರಹದಳದ ಎಡಿಜಿಪಿ, ಸಿಸಿಬಿ ಕ್ರೈಂ ಬ್ರ್ಯಾಂಚ್ ನಲ್ಲಿ ಕಾರ್ಯ ನಿರ್ವಹಿಸಿದ್ದರು. ತರಬೇತಿ ವಿಭಾಗದ ಐಜಿಪಿಯಾಗಿದ್ದರು. ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ಭಾರಿ ಸದ್ದು ಮಾಡಿದ ಒಂದಂಕಿ ಲಾಟರಿ ಪ್ರಕರಣದಲ್ಲಿ ಅಲೋಕ್ ಕುಮಾರ್ ಅವರ ಹೆಸರು ಕೇಳಿ ಬಂದಿದ್ದರಿಂದ ಅಮಾನತುಗೊಂಡಿದ್ದರು.