ಅಲ್ಲದೆ ಹೂಡಿಕೆದಾರರಿಗೆ ವಂಚನೆ ಮಾಡಿರುವ ಐಎಂಎ ಕಂಪನಿ ಮತ್ತು ಅದರ ನಿರ್ದೇಶಕ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ. ಅಲ್ಲದೆ ಪ್ರಸ್ತುತ ರಾಜ್ಯ ಸರ್ಕಾರ ನಡೆಸುತ್ತಿರುವ ತನಿಖೆ ಮೇಲೆ ತಮಗೆ ನಂಬಿಕೆ ಇಲ್ಲ. ಪ್ರಕರಣದಲ್ಲಿ ಹಿರಿಯ ರಾಜಕಾರಣಿಗಳು, ಅಧಿಕಾರಿಗಳ ಹೆಸರು ತಳುಕು ಹಾಕಿಕೊಂಡಿದೆ. ಹೀಗಾಗಿ ಕೇಂದ್ರೀಯ ತನಿಖಾ ಸಂಸ್ಥೆಯಾದ ಸಿಬಿಐಗೆ ತನಿಖೆಯ ಜವಾಬ್ದಾರಿ ವಹಿಸಬೇಕೂ ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.