ಡಿ.ಕೆ. ಚೌಟ ಅವರ ನಿಧನಕ್ಕೆ ಸಚಿವ ಕೃಷ್ಣ ಬೈರೇಗೌಡ ಸಂತಾಪ ಸೂಚಿಸಿದ್ದು, ಡಿ.ಕೆ. ಚೌಟ ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ದೊಡ್ಡ ಹೆಸರು. ಅವರು ಚಿತ್ರಕಲಾ ಪರಿಷತ್ತಿನ ಕಾರ್ಯದರ್ಶಿಯಾಗಿ, ರಂಗ ನಿರಂತರದ ಪೋಷಕರಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವ ಮೂಲಕ ಆ ಸಂಸ್ಥೆಗಳ ಬೆಳವಣಿಗೆಗೆ ಕಾರಣರಾದರು. ಚಿತ್ರಕಲಾ ಪರಿಷತ್ತಿನ ಬೆಳವಣಿಗೆಯಲ್ಲಿ ಡಿ.ಕೆ. ಚೌಟ ಅವರ ಪಾತ್ರ ಬಹಳ ದೊಡ್ಡದು. ಚಿತ್ರಸಂತೆ ಮೂಲಕ ಅವರು ರಾಷ್ಟ್ರಮಟ್ಟದಲ್ಲಿ ಚಿತ್ರಕಲಾ ಪರಿಷತ್ತು ಖ್ಯಾತಿ ಪಡೆಯಲು ಕಾರಣರಾದರು ಎಂದು ತಿಳಿಸಿದ್ದಾರೆ.