ಮುಖ್ಯಮಂತ್ರಿ ಕುಮರಸ್ವಾಮಿ ಅಳೆದೂ ತೂಗಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರನ್ನೆ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪರಮೇಶ್ವರ್ ಮುಖ್ಯಮಂತ್ರಿ ಎಚ್ ಡಿಕೆಗೆ ಪರಮಾಪ್ತರಾಗಿದ್ದು,ಅತ್ತ ಸಚಿವ ಡಿಕೆ ಶಿವಕುಮಾರ್ ಅವರಿಗೂ ಆಪ್ತರು ಎನ್ನಲಾಗಿದೆ. ಜೊತೆಗೆ ಯಾರನ್ನೂ ವಿರೋಧ ಕಟ್ಟಿಕೊಳ್ಳುವ ಜಾಯಮಾನದವರಲ್ಲ.ಹೀಗಾಗಿ ಪರಮೇಶ್ವರ್ ತಲೆಗೆ ವಿವಾದಿತ ಜಿಂದಾಲ್ ಜವಾಬ್ದಾರಿಯನ್ನು ಹೊರಿಸಲು ಕುಮಾರಸ್ವಾಮಿ ತೀರ್ಮಾನಿಸಲಿದ್ದಾರೆ ಎನ್ನಲಾಗಿದೆ.