ಈಗ ಮರ ಹತ್ತಿ ಕೆಲಸ ಮಾಡಲು ನುರಿತ ಕಾರ್ಮಿಕರು ಸಿಗುತ್ತಿಲ್ಲ ಎಂಬುದು ಕರಾವಳಿಯ ಅಡಕೆ ಬೆಳೆಗಾರರ ಅಳಲು. ಮರ ಹತ್ತಲು ಹಲವು ಯಂತ್ರಗಳ ಆವಿಷ್ಕಾರಗಳು ಕಾಲಕಾಲಕ್ಕೆ ನಡೆಯುತ್ತಲೇ ಇವೆ. ಇದಕ್ಕೊಂದು ಸೇರ್ಪಡೆ ಮರ ಹತ್ತುವ ಬೈಕ್. ಇದರ ಮೂಲ ಉದ್ದೇಶವೇ ಯಾರ ಸಹಾಯವೂ ಇಲ್ಲದೆ ಮರ ಹತ್ತುವುದು. ಸದ್ಯಕ್ಕೆ ಅಡಕೆ ಮರ ಹತ್ತಲು ಉಪಯೋಗವಾಗುತ್ತಿರುವ ಈ ಯಂತ್ರವನ್ನು ಪರಿಷ್ಕರಿಸಿ, ತೆಂಗಿನ ಮರ ಹತ್ತುವಂತೆ ಮಾಡುವ ಯೋಜನೆಯನ್ನು ಗಣಪತಿ ಭಟ್ ಹಾಕಿಕೊಂಡಿದ್ದಾರೆ.