ಚಿತ್ರದುರ್ಗ: ಸೆಲ್ಫಿ ವೀಡಿಯೋ ಮಾಡಿಟ್ಟು ಕೆರೆಗೆ ಹಾರಿದ ಯುವಕ ಆತ್ಮಹತ್ಯೆ

ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಪವನ್ ಕುಮಾರ್
ಪವನ್ ಕುಮಾರ್
ಚಿತ್ರದುರ್ಗ: ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ಪವನ್ ಕುಮಾರ್(20) ಸೆಲ್ಫಿ ವಿಡಿಯೋ ಮಾಡಿಟ್ಟು  ಜೋಗಿಮಟ್ಟಿ ರಸ್ತೆಯಲ್ಲಿನ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚಾಮರಾಜನಗರ ಮೂಲದ ಈ ಯುವಕ ನಗರದ ಕಾಸಗಿ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದನೆನ್ನಲಾಗಿದೆ.
"ಚಿತ್ರದುರ್ಗದಲ್ಲಿನ ನನ್ನ ಅಕ್ಕ-ಭಾವ ನನ್ನನ್ನು ಸ್ವಂತ ಮಗನಂತೆ ನೋಡಿಕೊಂಡಿದ್ದಾರೆ. ಆದರೆ ಜೀವನದಲ್ಲಿ ನಾನು ನಂಬಿದ್ದವರಿಂದಲೇ ಮೋಸ ಹೋಗಿದ್ದೇನೆ.ಮುಂದಿನ ಜನ್ಮದಲ್ಲಿ ಒಳ್ಳೆ ಹುಡುಗನಾಗಿ ಬಾಳುತ್ತೇನೆ" ಎಂದು ವೀಡಿಯೋ ಸಂದೇಶ ಮಾಡಿದ್ದ ಯುವಕ ನೀರಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ.
ಗುರುವಾರ ರಾತ್ರಿ ನಡೆದ ಈ ಘಟನೆ ಶುಕ್ರವಾರ ಬೆಳಿಗ್ಗೆ ಕೆರೆಯಲ್ಲಿ ಮೃತದೇಹ ತೇಲುತ್ತಿದ್ದದ್ದನ್ನು ಕಂಡಾಗ ಬೆಳಕಿಗೆ ಬಂದಿದೆ. ಆತನ ಮೊಬೈಲ್ ಸಿಮ್ ಹಾಸನ ಜಿಲ್ಲೆ ಅರಕಲಗೂಡಿನ ವಿಳಾಸದಲ್ಲಿದೆ.
ಘಟನೆ ಕುರಿತು ಕೋಟೆ ಠಾಣೆ ಪೋಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com