ವಾರ್ತಾ ಇಲಾಖೆಯ ಪ್ರದರ್ಶನ ಮಳಿಗೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಉದ್ಘಾಟಿಸಿದರು. ರೈತರ ಸಾಲ ಮನ್ನಾ, ಬಡವರ ಬಂಧು, ಕಾಯಕ, ಎಲ್ಲರಿಗೂ ಶಿಕ್ಷಣ, ತಳಸಮುದಾಯಗಳ ಅಭಿವೃದ್ಧಿಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆ ಮೂಲಕ ಕೈಗೊಂಡಿರುವ ಚಟುವಟಿಕೆಗಳನ್ನು ಸಚಿತ್ರವಾಗಿ, ನಿಖರ ಮಾಹಿತಿಯೊಂದಿಗೆ ಅಳವಡಿಸಿ ಜನರಿಗೆ ಪರಿಚಯಿಸುತ್ತಿರುವ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.