ಚಿತ್ರದುರ್ಗ: ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಶಾಲೆಗೆ ತೆರಳುತ್ತಿದ್ದ ಬಾಲೆ ಮಸಣ ಸೇರಿದ ದಾರುಣ ಘಟನೆ ಚಿತ್ರದುರ್ಗ ನಗರದ ರಾಷ್ಟ್ರೀಯ ಹೆದ್ದಾರಿ 4ರ ಜೆಎಮ್ಐಟಿ ವೃತ್ತದಲ್ಲಿ ನಡೆದಿದೆ.
ಅಮೃತ (12) ಮೃತ ವಿದ್ಯಾರ್ಥಿನಿ. ಆಕೆ ತಂದೆಯ ಜೊತೆ ಬೈಕ್ ಮೇಲೆ ಶಾಲೆಗೆ ತೆರಳುತ್ತಿದ್ದಾಗ ಹಿಂದಿನಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.
ಮೃತ ವಿದ್ಯಾರ್ಥಿನಿ ತಂದೆಗೆ ಗಂಭೀರ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.