ಈ ಬಗ್ಗೆ ಶಾಸಕ ಅಬ್ಬಯ್ಯ ಅವರನ್ನು ಮಾತನಾಡಿಸಿದಾಗ, ನಾನು ಯಾರಿಗೂ ನನ್ನ ಶೂ ತೆಗೆದು ಚಪ್ಪಲಿ ತನ್ನಿ ಎಂದು ಕೇಳಿರಲಿಲ್ಲ. ನನ್ನ ಚರ್ಮದ ಚಪ್ಪಲಿ ನೀರಿಗಿಳಿದರೆ ಹಾಳಾಗಬಹುದು ಎಂದಾಗ ನನ್ನ ಜೊತೆ ಇದ್ದವರು ಬೇರೆ ಚಪ್ಪಲಿ ತಂದುಕೊಟ್ಟರು. ನನ್ನ ಗನ್ ಮ್ಯಾನ್ ಗೆ ನನ್ನ ಶೂ ಮುಟ್ಟಲು ನಾನು ಹೇಳಿರಲಿಲ್ಲ. ಅವರೇ ಸಂತೋಷದಿಂದ ಆ ಕೆಲಸ ಮಾಡಿದ್ದು. ನನಗೆ ನನ್ನ ಶೂಗಿಂತ ಅಲ್ಲಿನ ಜನರ ಪರಿಸ್ಥಿತಿ, ಅಲ್ಲಿನ ಸಮಸ್ಯೆ ಮುಖ್ಯವಾಗಿತ್ತು ಎಂದಿದ್ದಾರೆ.