ಮಂಡ್ಯದಲ್ಲಿ ಸಚಿವ ಡಿ.ಕೆ ಶಿವಕುಮಾರ್ ಕಾರಿಗೆ ಮುತ್ತಿಗೆ

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕಾರಿಗೆ ರೈತರು ಮುತ್ತಿಗೆ ..
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕಾರಿಗೆ ರೈತರು ಮುತ್ತಿಗೆ ಹಾಕಿದ್ದಾರೆ.
ಶಿವಕುಮಾರ್ ಅವರು ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದರು. ರೈತರು ಈ ಮಾರ್ಗವಾಗಿ ಡಿಕೆಶಿ ಬರುವುದನ್ನು ತಿಳಿದು ಹೆದ್ದಾರಿಗಿಳಿದಿದ್ದರು. ಅದರಂತೆಯೇ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಶಿವಕುಮಾರ್ ಕಾರು ತಡೆದು ಮಂಡ್ಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆಗೂ ಮುಂಚೆ ಮಂಡ್ಯ ರೈತರ ಜಮೀನಿಗೆ ಪ್ರಾಧಿಕಾರವನ್ನು ಕೇಳದೆ ನೀರು ಬಿಟ್ಟಿದ್ದೀರಿ. ಆದರೆ ಚುನಾವಣೆ ಮುಗಿದ ಮೇಲೆ ನೀರು ಬಿಡಿ ಅಂದರೆ ಪ್ರಾಧಿಕಾರದ ಕಡೆ ಕೈ ತೋರಿಸುತ್ತೀರಾ ಎಂದು ಶಿವಕುಮಾರ್ ಅವರ ಕಾರಿಗೆ ರೈತರು ಮುತ್ತಿಗೆ ಹಾಕಿ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಜೂನ್ 25ರಂದು ಸಭೆ ಕರೆದಿದ್ದು, ಈ ಸಂಬಂಧವಾಗಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com