ಘೋರ ದುರಂತ! ದೇವರಿಗೆಂದು ಹಚ್ಚಿದ್ದ ನಂದಾದೀಪ ಬಾಲಕಿಯ ಪ್ರಾಣವನ್ನೇ ಕಸಿಯಿತು

ಮನೆಯಲ್ಲಿ ದೇವರ ಫೋಟೋ ಮುಂದೆ ಹಚ್ಚಿಟ್ಟ ನಂದಾದೀಪವೇ ಬಾಲಕಿಯ ಪ್ರಾಣವನ್ನೇ ಕಸಿದ ಘೋರ ದುರಂತ ಘಟನೆ ಬೆಳಗಾವಿಯ ಆನಿಗೋಳದಲ್ಲಿ ನಡೆದಿದೆ.
ಘೋರ ದುರಂತ! ದೇವರಿಗೆಂದು ಹಚ್ಚಿದ್ದ ನಂದಾದೀಪ ಬಾಲಕಿಯ ಪ್ರಾಣವನ್ನೇ ಕಸಿಯಿತು
ಘೋರ ದುರಂತ! ದೇವರಿಗೆಂದು ಹಚ್ಚಿದ್ದ ನಂದಾದೀಪ ಬಾಲಕಿಯ ಪ್ರಾಣವನ್ನೇ ಕಸಿಯಿತು
ಬೆಳಗಾವಿ: ಮನೆಯಲ್ಲಿ ದೇವರ ಫೋಟೋ ಮುಂದೆ ಹಚ್ಚಿಟ್ಟ ನಂದಾದೀಪವೇ ಬಾಲಕಿಯ ಪ್ರಾಣವನ್ನೇ ಕಸಿದ ಘೋರ ದುರಂತ ಘಟನೆ ಬೆಳಗಾವಿಯ ಆನಿಗೋಳದಲ್ಲಿ ನಡೆದಿದೆ.
ನಂದಾದೀಪದ ಬೆಂಕಿ ಹಾಸಿಗೆಗೆ ತಗುಲಿ ಹೊತ್ತಿ ಉರಿದ ಕಾರಣ ಕಸ್ತೂರಿ (8) ಸಜೀವವಾಗಿ ದಹನವಾಗಿದ್ದಾಳೆ.
ಸೋಮವಾರ ರಾತ್ರಿ ನಡೆದ ಘಟನೆಯಲ್ಲಿ ಮನೆಯಲ್ಲಿದ್ದ ಬಾಲಕಿಯ ಪೋಷಕರು ಅಪಾಯದಿಂದ ಪಾರಾಗಿದ್ದಾರೆ. ಸುಟ್ಟ ಗಾಯವಾಗಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ದೇವರ ದೀಪ ಕೆಳಗೆ ಬಿದ್ದು ಹಾಸಿಗೆಗೆ ತಗುಲಿ ಬೆಂಕಿ ಹೊತ್ತಿದೆ. ಆ ವೇಳೆ ಎಚ್ಚರಗೊಂಡ ಪೋಷಕರು ತಕ್ಷಣ ದೂರ ಸರಿದು ಅಪಾಯದಿಂದ ಪಾರಾದರೆ ಬಾಲಕಿ ಮಾತ್ರ ಸಜೀವ ದಹನವಾಗಿದ್ದಾಳೆ.
ಘಟನೆ ಕುರಿತಂತೆ ಟೀಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com