ದೇವೇಗೌಡರ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಜಯಮಹಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರು ಕೊನೆಯುಸಿರು ಇರುವವರೆಗೆ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದರು. ಮುತ್ತಪ್ಪ ರೈ ಅವರ ಜಯಕರ್ನಾಟಕ ಸಂಘಟನೆಗೆ ಸ್ಥಾಪಕ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರು, ಪತ್ರಕರ್ತ ಸಮೂಹದಲ್ಲಿ ಅತ್ಯಂತ ಜನಪ್ರಿಯ ವ್ಯಕ್ತಿಯಾಗಿದ್ದರು. ಯಾವಾಗಲೂ ತಮ್ಮ ಕಾರಿನಲ್ಲಿ ತಿಂಡಿ, ಇಡ್ಲಿ, ದೋಸೆ, ಚಿತ್ರಾನ್ನ, ಬಿರಿಯಾನಿ ಪೊಟ್ಟಣಗಳನ್ನು ಇಟ್ಟುಕೊಂಡು ಹಾದಿಬದಿಯಲ್ಲಿ ಕಾಣಸಿಗುವ ಹಸಿದವರಿಗೆ ಉಣಬಡಿಸುತ್ತಿದ್ದ ಅವರ ಮಾನವೀಯ ಸೇವೆ ಆದರ್ಶಪ್ರಾಯವಾಗಿತ್ತು.