ಬೆಂಗಳೂರು ನಗರದ ಆಧಾರ್ ಕಾರ್ಡ್ ಹೊಂದಿದ್ದ ಉಗ್ರ ಹಬಿಬುರ್ ರೆಹಮಾನ್!

ಗುರುವಾರ ರಾಮನಗರದಲ್ಲಿ ಪತ್ತೆಯಾಗಿದ್ದ ಎರಡು ಸಜೀವ ಬಾಂಬ್​ಗಳನ್ನು ತಾನೇ ಇಟ್ಟಿರುವುದಾಗಿ ಒಪ್ಪಿಕೊಂಡಿರುವ ಬಾಂಗ್ಲಾದೇಶದ ನಿಷೇಧಿತ ಜಮಾತ್ ಉಲ್....
ಹಬಿಬುರ್ ರೆಹಮಾನ್
ಹಬಿಬುರ್ ರೆಹಮಾನ್
ಬೆಂಗಳೂರು: ಗುರುವಾರ ರಾಮನಗರದಲ್ಲಿ ಪತ್ತೆಯಾಗಿದ್ದ ಎರಡು ಸಜೀವ ಬಾಂಬ್​ಗಳನ್ನು ತಾನೇ ಇಟ್ಟಿರುವುದಾಗಿ ಒಪ್ಪಿಕೊಂಡಿರುವ ಬಾಂಗ್ಲಾದೇಶದ ನಿಷೇಧಿತ ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ್ (ಜೆಎಂಬಿ) ಸಂಘಟನೆಯ ಶಂಕಿತ ಉಗ್ರ ಎಸ್.ಕೆ. ಹಬಿಬುರ್ ರೆಹಮಾನ್ ಅಲಿಯಾಸ್ ಶೇಖ್ ನ ಬಳಿ ಬೆಂಗಳೂರು ನಗರ ವಿಳಾಸ ಹೊಂದಿರುವ ಆಧಾರ್ ಕಾರ್ಡ್ ಪತ್ತೆಯಾಗಿದೆ.
ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಸ್ಥಳೀಯ ದಲ್ಲಾಳಿಯ ಸಹಾಯದಿಂದ ಆತ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದ. ಕೆಲ ಕಾಲ ವೈಟ್ ಫೀಲ್ಡ್ ನಲ್ಲಿ ಫಿನಾಯಿಲ್ ಹಾಗೂ ಬಟ್ಟೆ ಮಾರಾಟ ಮಾಡುವ ವ್ಯಾಪಾರದ ಸೋಗಿನಲ್ಲಿ ಈ ಹಿಂದೆ ಬಂಧಿತನಾಗಿದ್ದ ಮುನೀರ್ ಜೊತೆ ಆತ ಕೂಡಿಕೊಂಡು ದರೋಡೆಗೆ ಸಂಚು ರೂಪಿಸುತ್ತಿದ್ದ ಎಂದು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ.
ಈ ಇಬ್ಬರು ಆರೋಪಿಗಳ ವಿರುದ್ಧ ನಗರದ ಅಮೃತಹಳ್ಳಿ, ಅತ್ತಿಬೆಲೆ ಪೊಲೀಸ್ ಠಾಣೆ ಸೇರಿ ಐದು ಕಡೆ ಪ್ರಕರಣ ದಾಖಲಾಗಿವೆ. ಇವರು ದರೋಡೆಗೆ ಹೋಗುವ ಸಂದರ್ಭದಲ್ಲೂ ಸುಧಾರಿತ ಸ್ಫೋಟಕ ಸಾಧನ(ಐಇಡಿ) ತೆಗೆದುಕೊಂಡು ಹೋಗುತ್ತಿದ್ದರು ಎಂದು ರಾಷ್ಟ್ರೀಯ ತನಿಖಾ ದಳದ ವಿಚಾರಣೆಯಿಂದ ತಿಳಿದು ಬಂದಿದೆ.
2004ರ ಅಕ್ಟೋಬರ್ ನಲ್ಲಿ ನಡೆದ ಬದ್ವಾನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಗುರುವಾರ ಉಗ್ರನನ್ನು ಎನ್ ಐಎ ಅಧಿಕಾರಿಗಳು ಕೋಲ್ಕತ್ತಾಕ್ಕೆ ಕರೆದೊಯ್ಯಲಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com