ಈ ಗ್ರಾಮವಾಸ್ತವ್ಯ ಕಾರ್ಯಕ್ರಮದಿಂದ ಜನಸಾಮಾನ್ಯರಿಗೆ ಸ್ಪಂದಿಸುವಂತಹ ವಾತಾವರಣ ನಿರ್ಮಾಣವಾಗುತ್ತದೆ, ಜನತಾದರ್ಶನದಲ್ಲಿ ಹಾಗೂ ಅಹವಾಲು ಆಲಿಕೆಯಲ್ಲಿ ಅರ್ಜಿ ಸಲ್ಲಿಸಿದ ಜನರ ನೋವುಗಳಿಗೆ ಸ್ಪಂದಿಸಬೇಕಿರುವುದು ಸರ್ಕಾರದ ಜವಾಬ್ದಾರಿಯಾಗಿದೆ, ಸಾಮಾಜಿಕ ನ್ಯಾಯದ ಬಗ್ಗೆ ಚರ್ಚಿಸುವುದು ನಮ್ಮ ಕರ್ತವ್ಯವಾಗಿದೆ, ಈ ಗ್ರಾಮವಾಸ್ತವ್ಯ ಕಾರ್ಯಕ್ರಮ ರೂಪಿಸುವ ಮೂಲಕ ಸರ್ಕಾರವು ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ತಿಳಿಸಿದರು.