ಯಡಿಯೂರುನಿಂದ ಬೆಂಗಳೂರಿಗೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಘಟನೆಯಲ್ಲಿ ನಾಲ್ಕು ಮಹಿಳೆಯರು , ಒಬ್ಬ ಪುರುಷ ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇವರೆಲ್ಲರೂ ಬೆಂಗಳೂರಿನ ಸಂಜಯನಗರ ನಿವಾಸಿಗಳಾಗಿದ್ದು, ಎಡೆಯೂರು ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಮರಳಿ ಬೆಂಗಳೂರಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.