ಚಿಕ್ಕಮಗಳೂರು: ಸಾಮಾನ್ಯವಾಗಿ ಜಲಪಾತಗಳು ಪ್ರವಾಸೀ ತಾಣಗಳಾಗಿ ಸಾಕಷ್ಟು ಜನರಿಗೆ ಆಕರ್ಷಣೆಯ ಕೇಂದ್ರಬಿಂದುವಾಗಿರುತ್ತದೆ. ಮಳೆಗಾಲದ ಈ ದಿನಗಳಲ್ಲಿ ನಾಡಿನಾದ್ಯಂತ ಜಲಪಾತಗಳಿಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತದೆ. ಈ ನಡುವೆ ಚಿಕ್ಕಮಗಳೂರು ಜಿಲ್ಲೆ ಬಾಬಾಬುದಂಗಿರಿ ಬೆಟ್ಟಗಳ ಮಾಣಿಕ್ಯಧಾರ ಜಲಪಾತ ಸಮೀಪ ಧಿಕಾರಿಗಳು ಒಂದು ವಿಶಿಷ್ಟವಾದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅದೆಂದರೆ ಇಲ್ಲಿಗೆ ಆಗಮಿಸುವ ಪ್ರವಾಸಿಗರು ನೀರಿನಲ್ಲಿ ಸ್ನಾನ ಮಾಡಿದ ನಂತರ ಬಟ್ಟೆಗಳನ್ನು ಇಲ್ಲಿಯೇ ಬಿಟ್ಟು ಹೋಗುತ್ತಿದ್ದಾರೆ.