ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ 22 ಸೀಟು ಗೆಲ್ಲುವ ಹೇಳಿಕೆ ಬಹಳ ಚಿಕ್ಕದು. ಇದಕ್ಕೆ ಅಷ್ಟೊಂದು ಮಹತ್ವ ನೀಡಬೇಕಾಗಿಲ್ಲ್ಲ ಎಂದು ಪೇಜಾವರಶ್ರೀಗಳು ಹೇಳಿದ್ದಾರೆ. "ಇದು ದೊಡ್ಡ ವಿಚಾರವಲ್ಲ. ಇಂದಿರಾಗಾಂಧಿ ಆಳ್ವಿಕೆಯಲ್ಲಿ ಯುದ್ಧವಾದಾಗಲೂ ಕಾಂಗ್ರೆಸ್ ಗೆ ಪ್ರಯೋಜನವಾಗಿದೆ ಎಂದು ಎಲ್ಲರೂ ಮಾತನಾಡಿಕೊಂಡಿದ್ದರು.ಯಡಿಯೂರಪ್ಪ ಅವರ ಹೇಳಿಕೆಯನ್ನು ದೊಡ್ಡ ವಿಷಯ ಮಾಡುವುದು ಬೇಡ, ಪಾಕಿಸ್ತಾನದಲ್ಲಿನ ಉಗ್ರರ ಸಂಹಾರವಾಗಬೇಕು.ಸೈನಿಕರ ಸರ್ಜಿಕಲ್ ಸ್ಟ್ರೈಕ್ ಗೆ ಅಭಿನಂದನೆ" ಶ್ರೀಗಳು ಹೇಳಿದ್ದಾರೆ.