ಉದ್ಯಾನಗರಿ ಬೆಂಗಳೂರಿನಲ್ಲಿ ಪರಿಸರ ಸ್ನೇಹಿ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡುತ್ತಿದೆ. ಆದರೆ ಚಾರ್ಜಿಂಗ್ ಕೇಂದ್ರಗಳ ಕೊರತೆಯಿಂದಾಗಿ ಯೋಜನೆ ಇನ್ನೂ ಯಶಸ್ವಿಯಾಗಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಚಾರ್ಜಿಂಗ್ ಕೇಂದ್ರಗಳನ್ನು ಹೆಚ್ಚಿಸಲು ಬೆಸ್ಕಾಂಗೆ ಸೂಚಿಸಿದೆ. ಇದಕ್ಕಾಗಿ ತಕ್ಷಣ 4 ಕೋಟಿ ರೂ. ಅನುದಾನವನ್ನೂ ಬಿಡುಗಡೆ ಮಾಡಿದೆ.