ಬಿಜೆಪಿ ಮುಖಂಡರಾದ ವಿಶ್ವನಾಥ್, ಅಶ್ವತ್ ನಾರಾಯಣ್ ಮತ್ತು ಯೋಗೇಶ್ವರ್ ಅವರುಗಳು ಕಾಂಗ್ರೆಸ್ ಶಾಸಕರು ತಮ್ಮ ಪಕ್ಷದಿಂದ ರಾಜೀನಾಮೆ ಸಲಿಸಿ ಬಿಜೆಪಿ ಸೇರಿದ್ದರೆ 25 ಕೋಟಿ ರೂ.ಗಳನ್ನು ನೀಡಿರುವುದಾಗಿ ಆಮಿಷ ಒಡ್ಡಿದ್ದಾರೆಂದು ಶ್ರೀನಿವಾಸ್ ಆರೋಪಿಸಿದ್ದಾರೆ. ಅದರಲ್ಲಿ 5 ಕೋಟಿ ರೂ. ಮುಂಗಡ ಪಾವತಿಯಾಗಿರಲಿದೆ ಎಂದೂ ಅವರು ಹೇಳಿದ್ದಾರೆ. ಶಾಸಕಾಂಗ ಸಭೆಯ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಈ ಕುದುರೆ ವ್ಯಾಪಾರ, ನಡೆದಿದೆ ಎಂದು ಅವರು ಆರೊಪಿಸಿದ್ದು ಇವರ ಹೇಳಿಕೆಯ ಪ್ರೇರಣೆಯಿಂದ ಸಾಮಾಜಿಕ ಕಾರ್ಯಕರ್ತರೊಬ್ಬರು ಎಸಿಬಿಗೆ ಈ ಕುರಿತು ದೂರು ಸಲ್ಲಿಸಿದ್ದರು.